
ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಮತ್ತು ಜಿ.ಬಸವರಾಜ ಅವರಿದ್ದ ಪೀಠವು 5 ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಆಧಾರದ ಮೇಲೆ ವಿನಯ್ ಕುಲಕರ್ಣಿ ಸೇರಿದಂತೆ 10 ಮಂದಿಗೆ ಜಾಮೀನು ನೀಡಿದೆ.
2026ರ ಏಪ್ರಿಲ್ 17ರಂದು ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು, ಇದೀಗ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿರುವುದರಿಂದ ಅವರ ಶಾಸಕ ಸ್ಥಾನಕ್ಕೆ ಮರು ಅವಕಾಶ ಸಿಗುವ ಸಾಧ್ಯತೆ ಇದೆ.