
ರಾಜ್ಯದ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಆಹಾರದ ಗುಣಮಟ್ಟದ ಬಗ್ಗೆ ದೂರು ನೀಡಲು ಆರೋಗ್ಯ ಇಲಾಖೆ ಹೊಸ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
ಬೆಂಗಳೂರಿನಲ್ಲಿ ಈಗಾಗಲೇ 60ಕ್ಕೂ ಹೆಚ್ಚು ಕಡೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಪಿಜಿ ಮತ್ತು ರೈಲ್ವೆ ಕ್ಯಾಂಟೀನ್ಗಳಲ್ಲೂ ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶವನ್ನು ಹಿಂಪಡೆದಿಲ್ಲ ಮತ್ತು ಅದು ಮುಂದಿನ ಒಂದು ವರ್ಷದವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.