
ಕೊಡಗಿನ ದೇವರಪುರ ಬಳಿ ಭಾನುವಾರ ನಸುಕಿನಲ್ಲಿ ನಡೆದ ಇಂಧನ ಟ್ಯಾಂಕರ್ ಮತ್ತು ಕಾರಿನ ನಡುವಿನ ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು 18 ವರ್ಷದ ಗೋಕುಲ್ ಮತ್ತು ಚೇತನ್ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದೇವರಪುರದ ತೀವ್ರ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ಗೋಣಿಕೊಪ್ಪಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.