
ಸರ್ಕಾರಿ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಸಾರ್ವಜನಿಕ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಸಂಸದ ತೇಜಸ್ವಿ ಸೂರ್ಯ ಸಿಎಂ ಡಿ.ಕೆ. ಶಿವಕುಮಾರ್ಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನ ಹಸಿರು ವಲಯವನ್ನು ರಿಯಲ್ ಎಸ್ಟೇಟ್ ಲಾಬಿಗಾಗಿ ಬಲಿ ಕೊಡಬಾರದು ಎಂದು ಆಗ್ರಹಿಸಿರುವ ಅವರು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.
ಈ ವಿಷಯವನ್ನು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪ್ರಬಲವಾಗಿ ಪ್ರಸ್ತಾಪಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.