
ಉಡುಪಿಯಿಂದ ಬೀದರ್ವರೆಗೆ ರಾಜ್ಯದ 16 ಜಿಲ್ಲೆಗಳಲ್ಲಿ ಆಗಸ್ಟ್ 1ರವರೆಗೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಆಗಸ್ಟ್ 2ರ ನಂತರ ಮುಂಗಾರು ದುರ್ಬಲಗೊಂಡು ರಾಜ್ಯಾದ್ಯಂತ ಹಗುರ ಮಳೆ ಮಾತ್ರ ನಿರೀಕ್ಷಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಮಳೆಯಾಗದೆ ರೈತರು ಬೆಳೆ ಕಟಾವಿನ ಆತಂಕದಲ್ಲಿದ್ದಾರೆ.