
ಬೆಂಗಳೂರು ಉಪನಗರ ರೈಲು ಯೋಜನೆಯ ಮಲ್ಲಿಗೆ ಕಾರಿಡಾರ್ ಕಾಮಗಾರಿಗೆ ಅದಾನಿ ಗ್ರೂಪ್ನ ಸೆಮಿಂಡಿಯಾ ಪ್ರಾಜೆಕ್ಟ್ಸ್ ಲಿಮಿಟೆಡ್ 665.61 ಕೋಟಿ ರೂಪಾಯಿಗೆ ಬಿಡ್ ಸಲ್ಲಿಸಿ ಎಲ್1 ಬಿಡ್ಡರ್ ಆಗಿ ಹೊರಹೊಮ್ಮಿದೆ.
ಈ ಯೋಜನೆಯಡಿ ಯಶವಂತಪುರ ಮತ್ತು ಮತ್ತಿಕೆರೆ ನಡುವೆ 1.2 ಕಿ.ಮೀ ಉದ್ದದ ಡಬಲ್-ಡೆಕರ್ ಮೇಲ್ಸೇತುವೆಯನ್ನು ನಿರ್ಮಿಸಲಾಗುತ್ತಿದ್ದು, ಇದು ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲಿದೆ.
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ನೀಡಿದ ನಂತರ, ಈ ಸಿವಿಲ್ ಕಾಮಗಾರಿಗಳನ್ನು 24 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವ ಗುರಿಯನ್ನು ಕೆ-ರೈಡ್ ಸಂಸ್ಥೆ ಹೊಂದಿದೆ.