
ಅಮೆರಿಕ ಪ್ರವಾಸದಿಂದ ಮರಳಿದ ಬಳಿಕ ದೇಶವೇ ಅಲ್ಲೋಲ ಕಲ್ಲೋಲವಾಗುವಂತಹ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಕೆಪಿಎಸ್ಸಿ ಅಕ್ರಮದ ಬಗ್ಗೆ ಸದನದಲ್ಲಿ ಸಿಎಂ ಉತ್ತರಿಸಿದ್ದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ಓಎಂಆರ್ ತಿದ್ದಿ ಪರೀಕ್ಷೆ ಪಾಸ್ ಆದವರಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ತಾನು ಸಿಎಂ ಆಗಿದ್ದಾಗ ದಲಿತರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ಮಾಡಿದ್ದೆ ಹೊರತು, ಯಾವುದೇ ಕಾನೂನು ಬಾಹಿರ ಸೂಚನೆಗಳನ್ನು ನೀಡಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.