
ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೆಪಿಎಸ್ಸಿ–ಜೆಎಸ್ಎಸ್ಸಿ ಸುಧಾರಣಾ ಮಂಚ್ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಶುಕ್ರವಾರಕ್ಕೆ 21ನೇ ದಿನ ತಲುಪಿದೆ.
ಸ್ವಾತಂತ್ರ್ಯ ದಿನದ ಅಂಗವಾಗಿ ಶನಿವಾರ ತಿರಂಗಾ ಯಾತ್ರೆ ನಡೆಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದು, ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಐ ಅಥವಾ ನಿವೃತ್ತ ನ್ಯಾಯಾಧೀಶರ ಸಮಿತಿಯಿಂದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಆಗಸ್ಟ್ 10ರಂದು ನಡೆದ ಘರ್ಷಣೆಯ ನಂತರ ಪೊಲೀಸರು ವಿಡಿಯೊ ಪರಿಶೀಲನೆ ನಡೆಸುತ್ತಿದ್ದು, 13 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೇವೇಂದ್ರ ನಾಥ್ ಮಹಾತೊ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.