
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿಗೆ ಹೋಗಿಲ್ಲ ಎಂದು ಸಚಿವ ಬಿ. ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಕೊಪ್ಪಳದ ಮುನಿರಾಬಾದ್ನಲ್ಲಿ ಮಾತನಾಡಿದ ಅವರು, ರಾಜ್ಯದಿಂದ ಹೊರಹೋಗುವಾಗಲೆಲ್ಲ ಅನುಮತಿ ಪಡೆದಿದ್ದೇನೆ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದರು.
ನಾನು ಆರೋಪಿಯೇ ಹೊರತು ಅಪರಾಧಿಯಲ್ಲ ಎಂದು ಹೇಳಿರುವ ನಾಗೇಂದ್ರ, ಪ್ರಕರಣದಿಂದ ಮುಕ್ತವಾಗಿ ಹೊರಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.