
ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಹೆಚ್ಎಂಟಿ ಸಂಸ್ಥೆಯ 430 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಧ್ಯಂತರ ತಡೆ ನೀಡಿದೆ.
ಜೂನ್ 16ರಂದು ಅರಣ್ಯ ಉಪ ಸಂರಕ್ಷಣಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹೆಚ್ಎಂಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರಾಜ್ ಗೋವಿಂದರಾಜ್ ಈ ಆದೇಶ ನೀಡಿದ್ದಾರೆ.
ಹೆಚ್ಎಂಟಿ ಸಂಸ್ಥೆಯು ತನ್ನ ವಶದಲ್ಲಿರುವ ಉಳಿದ ಜಮೀನನ್ನು ಮಾರಾಟ ಮಾಡುವುದಿಲ್ಲ ಅಥವಾ ಆಸ್ತಿಯ ಸ್ವರೂಪ ಬದಲಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ನೀಡಿದೆ.