
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಜುಲೈ ತಿಂಗಳಲ್ಲಿ ಆರನೇ ಬಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಕಳೆದ ರಾತ್ರಿ 3 ಗಂಟೆ ಸುಮಾರಿಗೆ ಸ್ಥಳೀಯರಿಗೆ ದರ್ಶನ ನೀಡಿದೆ.
ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಇಟ್ಟಿದ್ದ ಬೋನ್ನಲ್ಲಿ ಯಾವುದೇ ಆಮಿಷವಿಲ್ಲದ ಕಾರಣ ಕಾರ್ಯಾಚರಣೆ ವಿಫಲವಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಚಿರತೆಯ ಭಯದಿಂದಾಗಿ ಸ್ಥಳೀಯರು ಮನೆಯಿಂದ ಹೊರಬರಲು ಆತಂಕಪಡುತ್ತಿದ್ದು, ವೈಜ್ಞಾನಿಕ ವಿಧಾನಗಳನ್ನು ಬಳಸಿ ಕೂಡಲೇ ಚಿರತೆಯನ್ನು ಸೆರೆಹಿಡಿಯಬೇಕೆಂದು ಒತ್ತಾಯಿಸಿದ್ದಾರೆ.