
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಬಸ್ ಚಾಲಕ ಗುರು ಪ್ರಸಾದ್ ಮತ್ತು ಕ್ಲೀನರ್ ಶಂಕರ್ ಮೃತಪಟ್ಟಿದ್ದು, ಬಸ್ನಲ್ಲಿದ್ದ ಒಟ್ಟು 56 ಪ್ರಯಾಣಿಕರ ಪೈಕಿ 26 ಮಂದಿ ಗಾಯಗೊಂಡಿದ್ದಾರೆ ಮತ್ತು ಉಳಿದ 28 ಮಂದಿ ಸುರಕ್ಷಿತವಾಗಿದ್ದಾರೆ ಎಂದು ಎಸ್ಪಿ ರಂಜಿತ್ ಬಂಡಾರು ತಿಳಿಸಿದ್ದಾರೆ.
ಬಸ್ನಲ್ಲಿದ್ದ ಪ್ರಯಾಣಿಕರು ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ರಾತ್ರಿ ಸುಮಾರು 10:30ರ ವೇಳೆಗೆ ಅಪಘಾತ ಸಂಭವಿಸಿದಾಗ ಸ್ಥಳೀಯರು ಬಸ್ನ ಗಾಜು ಒಡೆದು ಇವರನ್ನು ರಕ್ಷಿಸಿದ್ದಾರೆ.