
ಗದಗದ ಐತಿಹಾಸಿಕ ಭೀಷ್ಮ ಕೆರೆಗೆ ಚರಂಡಿ ನೀರು ಸೇರುತ್ತಿರುವುದರಿಂದ ಕೆರೆ ಕಲುಷಿತಗೊಂಡು ನೂರಾರು ಮೀನುಗಳು ಸಾವನ್ನಪ್ಪಿವೆ.
ನಗರದ ಹೊಸ ಬಸ್ ನಿಲ್ದಾಣದ ಮಾರ್ಗದ ಚರಂಡಿ ನೀರು ಕೆರೆಗೆ ಸೇರುತ್ತಿದ್ದು, ಇದರಿಂದಾಗಿ ಕೆರೆಯ ಸುತ್ತಮುತ್ತ ದುರ್ವಾಸನೆ ಹರಡಿದೆ.
ಕಳೆದ ವಾರ ಲೋಕಾಯುಕ್ತರು ಸೂಚನೆ ನೀಡಿದ್ದರೂ, ಪ್ರವಾಸೋದ್ಯಮ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.