
ಕರ್ನಾಟಕದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಮತ್ತು ಮಸೀದಿ ಮುಂದೆ ಪಟಾಕಿ ಹೊಡೆಯಲು ನಿರ್ಬಂಧ ಹೇರಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಹಾಗೂ ಓಲೈಕೆ ರಾಜಕಾರಣದಿಂದಾಗಿ ಪೊಲೀಸರು ಹಿಂದೂಗಳ ಧಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳಲು ಹೊರಟಿದ್ದಾರೆ ಎಂದು ಅವರು ದೂರಿದ್ದಾರೆ.
ತಕ್ಷಣವೇ ಈ ನಿರ್ಬಂಧಗಳನ್ನು ಹಿಂಪಡೆಯದಿದ್ದರೆ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗುತ್ತದೆ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.