
ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕರು ಮತ್ತು ಏಳೆಂಟು ಜಿಲ್ಲೆಗಳ ಅಡಿಕೆ ಬೆಳೆಗಾರರ ಮೇಲೆ ಈ ಆದೇಶ ಪರಿಣಾಮ ಬೀರುವುದರಿಂದ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ.
ತಮ್ಮ ಗಮನಕ್ಕೆ ತರದೇ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡಿರುವ ಸಿಎಂ, ಶೀಘ್ರದಲ್ಲೇ ಆದೇಶ ಹಿಂಪಡೆಯುವುದಾಗಿ ತಿಳಿಸಿದ್ದಾರೆ.