Health & Environment
ಬೀದರ್ ಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

ಬೀದರ್ ಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

prajavani1h
THE BRIEF
1

ತೆಲಂಗಾಣದ ಜಹೀರಾಬಾದ್ ಬಳಿ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ನಡೆದ ಅಪಘಾತದಲ್ಲಿ ಬೀದರ್ ತಾಲ್ಲೂಕಿನ ರಾಜಗೀರಾ ಗ್ರಾಮದ ಆರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2

ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೆದಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ; ಮೃತರಲ್ಲಿ ದೇವದಾಸ್ ಮಾರುತಿ, ರೇಖಾ ಸಂಜು, ಶ್ರೀದೇವಿ ಮೊಗಲಪ್ಪ, ಕವಿತಾ ಗುಂಡಪ್ಪ, ರೇಷ್ಮಾ ಶೈಲೇಶ್ ಹಾಗೂ ನಿಖಿತಾ ಸೇರಿದ್ದಾರೆ.

3

ಸಚಿವ ಈಶ್ವರ ಬಿ. ಖಂಡ್ರೆ ಘಟನೆಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲು ಮತ್ತು ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ತೆಲಂಗಾಣ ಆಡಳಿತದೊಂದಿಗೆ ಸಂಪರ್ಕದಲ್ಲಿರಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.