
ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಕಳೆದ ನಾಲ್ಕು ತಿಂಗಳಿಂದ ಬರಬೇಕಾದ 31.20 ಕೋಟಿ ರೂ. ಪ್ರೋತ್ಸಾಹಧನ ಬಾಕಿ ಉಳಿದಿದೆ.
ಜಿಲ್ಲೆಯಲ್ಲಿ ಪ್ರತಿದಿನ 5.10 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಸುಮಾರು 40,000 ರೈತರು ಪ್ರತಿ ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹಧನಕ್ಕಾಗಿ ಕಾಯುತ್ತಿದ್ದಾರೆ.
ಚಿಮೂಲ್ ಅಧ್ಯಕ್ಷ ಮಂಜುನಾಥ್ ರೆಡ್ಡಿ ಮತ್ತು ಶಾಸಕ ಪ್ರದೀಪ್ ಈಶ್ವರ್ ಅವರು ಬಾಕಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಿಸುವುದಾಗಿ ರೈತರಿಗೆ ಭರವಸೆ ನೀಡಿದ್ದಾರೆ.