
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಹುದ್ದೆ ಸುರಕ್ಷಿತವಾಗಿದ್ದು, 2027ರ ಏಕದಿನ ವಿಶ್ವಕಪ್ವರೆಗೆ ಅವರು ತಂಡದ ಕೋಚ್ ಆಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ.
ತಂಡದ ಪರಿವರ್ತನಾ ಹಂತ ಮತ್ತು ಪ್ರಮುಖ ಆಟಗಾರರ ಗಾಯದ ಸಮಸ್ಯೆಗಳನ್ನು ಪರಿಗಣಿಸಿರುವ ಬಿಸಿಸಿಐ, ಗಂಭೀರ್ ಅವರಿಗೆ ಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ.
ಶ್ರೀಲಂಕಾ ವಿರುದ್ಧ ಆಗಸ್ಟ್ 15ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯ ಫಲಿತಾಂಶ ಏನೇ ಇದ್ದರೂ, ಗಂಭೀರ್ ಅವರ ರೆಡ್-ಬಾಲ್ ಕೋಚಿಂಗ್ ಸ್ಥಾನಕ್ಕೆ ಯಾವುದೇ ಕುತ್ತಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.