
ಕರ್ನಾಟಕ ಸರ್ಕಾರವು ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ 4 ರಿಂದ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ನಿರ್ಧರಿಸಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಕೆ.ಆರ್. ನಗರದಲ್ಲಿ 6.50 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿದ್ದು, ಮುಂದಿನ 3 ತಿಂಗಳೊಳಗೆ ಹೊಸ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರ ಜಮೀನುಗಳನ್ನು ಪರಿಶೀಲಿಸಿದ ಅವರು, ಬರ ಘೋಷಣೆ ನಿಯಮ ಸಡಿಲಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದಾರೆ.