
ಸೆಪ್ಟೆಂಬರ್ 14ರ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಪಿಓಪಿ ಮತ್ತು ರಾಸಾಯನಿಕ ಬಣ್ಣದ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ವಿಸರ್ಜನೆಯನ್ನು ನಿಷೇಧಿಸಿ ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ.
ಜಲ ಮಾಲಿನ್ಯ ತಡೆ ಕಾಯಿದೆ 1974ರ ಕಲಂ 33(ಎ) ಅಡಿಯಲ್ಲಿ ನದಿ, ಕೆರೆ ಮತ್ತು ಬಾವಿಗಳಲ್ಲಿ ಪಿಓಪಿ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಪರಿಸರ ಸ್ನೇಹಿ ಮಣ್ಣಿನ ಗಣಪತಿ ಪೂಜಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಮತ್ತು ಹೈಕೋರ್ಟ್ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯತಿಗಳಿಗೆ ಸೂಚನೆ ನೀಡಲಾಗಿದೆ.