
ಮುಂಗಾರು ಮಳೆ ಕೊರತೆಯಿಂದ ಈರುಳ್ಳಿ ಇಳುವರಿ ಶೇಕಡಾ 70ರಷ್ಟು ಕಡಿಮೆಯಾಗಿದ್ದು, ರಾಜ್ಯದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 75 ರೂಪಾಯಿವರೆಗೆ ಏರಿಕೆಯಾಗಿದೆ.
ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 50 ರಿಂದ 60 ರೂ. ದರವಿದ್ದು, ಮುಂದಿನ ಒಂದೂವರೆ ತಿಂಗಳಲ್ಲಿ ಬೆಲೆ 100 ರೂಪಾಯಿ ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ಹೊರ ರಾಜ್ಯಗಳಿಗೆ ರಫ್ತು ಮುಂದುವರಿದಿದ್ದು, ಆಮದು ಸ್ಥಗಿತಗೊಂಡಿರುವುದರಿಂದ ಬೆಲೆ ಏರಿಕೆಯಾಗಿದ್ದು, ಸರ್ಕಾರ ರಿಯಾಯಿತಿ ದರದಲ್ಲಿ ಈರುಳ್ಳಿ ಒದಗಿಸಬೇಕೆಂದು ಗ್ರಾಹಕರು ಆಗ್ರಹಿಸಿದ್ದಾರೆ.