
ನಟಿ ತ್ರಿಶಾ ಕೃಷ್ಣನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಕಾವೇರಿ ನದಿ ನೀರು ವಿವಾದದ ಕುರಿತು ತಂಜಾವೂರಿನಲ್ಲಿ ನಡೆದ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಅವರು ನಟಿ ತ್ರಿಶಾ ಅವರ ಹೆಸರನ್ನು ಉಲ್ಲೇಖಿಸಿ ಡಬಲ್ ಮೀನಿಂಗ್ ಹೇಳಿಕೆ ನೀಡಿದ್ದರು.
ಮಧ್ಯಾಹ್ನ 12 ಗಂಟೆಯವರೆಗೆ ಬಂಧಿಸದಂತೆ ಕೋರ್ಟ್ ನಿರ್ದೇಶನ ನೀಡಿದ್ದರೂ, ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ.