
ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ರಾವ್ ಅವರನ್ನು ‘ಮಾಫಿ ಸಾಕ್ಷಿ’ಯನ್ನಾಗಿ ಪರಿಗಣಿಸಿ ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯವು ಮರು ಆದೇಶ ಹೊರಡಿಸಿದೆ.
ಹೈಕೋರ್ಟ್ ಸೂಚನೆ ಮೇರೆಗೆ ನಡೆದ ವಿಚಾರಣೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದ ಪ್ರದೂಷ್, ತಾನು ಮಾಫಿ ಸಾಕ್ಷಿಯಾಗಲು ಒಪ್ಪುವುದಾಗಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾರೆ.
ಆದೇಶವನ್ನು ತಡೆಹಿಡಿಯುವಂತೆ ನಟ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.