
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಕೈಕೊಟ್ಟಿದ್ದು, ರಾಯಚೂರಿನ ಜೀವನಾಡಿ ತುಂಗಭದ್ರಾ ನದಿ ಸಂಪೂರ್ಣ ಬತ್ತಿಹೋಗಿ ಬಂಡೆಗಳು ಕಾಣಿಸುತ್ತಿವೆ.
ಮಂತ್ರಾಲಯದಲ್ಲಿ ಭಕ್ತರಿಗೆ ಪುಣ್ಯಸ್ನಾನ ಮಾಡಲು ನೀರಿಲ್ಲದಂತಾಗಿದ್ದು, ರಾಯಚೂರು-ಆಂಧ್ರ ಗಡಿ ಭಾಗದ ಲಕ್ಷಾಂತರ ಹೆಕ್ಟೇರ್ ಪ್ರದೇಶದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗದಗ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಹೆಸರು, ಉದ್ದು, ಸೋಯಾಬೀನ್ ಮತ್ತು ತೊಗರಿ ಬೆಳೆಗಳು ನಾಶವಾಗುತ್ತಿದ್ದು, ರೈತರು ಬೆಳೆಗಳನ್ನು ಕಿತ್ತೆಸೆಯುತ್ತಿದ್ದಾರೆ.