
ರಾಜ್ಯದಲ್ಲಿ ಬಡವರಿಗೆ ಸುಮಾರು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ತೀರ್ಮಾನಿಸಿದ್ದಾರೆ ಎಂದು ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಕಂದಾಯ ಸಚಿವರಾಗಿ ಡಿಸೆಂಬರ್ ಒಳಗೆ ಐದು ಲಕ್ಷ ನಿವೇಶನಗಳನ್ನು ನೀಡಲು ನಿರ್ಧರಿಸಿದ್ದು, ಜಿಲ್ಲಾಧಿಕಾರಿಗಳಿಗೆ ಸ್ಥಳ ಗುರುತಿಸಲು ಸೂಚಿಸಲಾಗಿದೆ.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದೇಶದ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.