
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರು ಪಕ್ಷದ ನೂತನ ರಾಷ್ಟ್ರೀಯ ತಂಡವನ್ನು ಘೋಷಿಸಿದ್ದು, ಸ್ಮೃತಿ ಇರಾನಿ ಸೇರಿದಂತೆ ಹಲವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಕರ್ನಾಟಕದ ರಾಜ್ಯಸಭಾ ಸಂಸದ ಪ್ರೊ. ಎಂ. ನಾಗರಾಜ್ ಸೇರಿದಂತೆ 13 ಮಂದಿಯನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಪಿಯೂಷ್ ಗೋಯಲ್ ಖಜಾಂಚಿಯಾಗಿ ಮುಂದುವರಿದಿದ್ದಾರೆ.
2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಈ ಸಂಘಟನಾತ್ಮಕ ಬದಲಾವಣೆಗಳನ್ನು ಮಾಡಲಾಗಿದೆ.