ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ 50,000 ಕ್ಯೂಸೆಕ್ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ 24 ಕ್ರಸ್ಟ್ ಗೇಟ್ಗಳನ್ನು ತೆರೆದು 84,300 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಜಲಾಶಯದ ಗರಿಷ್ಠ ಮಟ್ಟ 492.252 ಮೀಟರ್ ಇದ್ದು, ಪ್ರಸ್ತುತ ನೀರಿನ ಮಟ್ಟ 492.05 ಮೀಟರ್ಗೆ ತಲುಪಿದ್ದು, ಜಲಾಶಯವು ಶೇ 97.18ರಷ್ಟು ಭರ್ತಿಯಾಗಿದೆ.
ರಾತ್ರಿ ವೇಳೆಗೆ ಒಳಹರಿವು 90,000 ದಿಂದ 1 ಲಕ್ಷ ಕ್ಯೂಸೆಕ್ಗೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.