
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ತಮ್ಮ ಆಡಳಿತಾವಧಿಯಲ್ಲಿ 14 ಜಲಾಶಯಗಳ ಆಧುನೀಕರಣದಿಂದ 94,000 ಎಕರೆ ಅಚ್ಚುಕಟ್ಟು ಪ್ರದೇಶ ಸ್ಥಿರಗೊಳಿಸಿದ್ದು, ಮೈಷುಗರ್ ಕಾರ್ಖಾನೆಗೆ 50 ಕೋಟಿ ರೂ. ಬಿಡುಗಡೆ ಮಾಡಿದ್ದಾಗಿ ತಿಳಿಸಿದರು.
ಕಾವೇರಿ ನೀರಿನ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದು, ರೈತರ ಹಿತಾಸಕ್ತಿ ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಟೀಕಿಸಿದರು.