
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ದೇಶದ 19 ರಾಜ್ಯಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.
ಜೂನ್ 4 ರಿಂದ ದೇಶದ ಒಟ್ಟು ಮಳೆಯ ಪ್ರಮಾಣವು ಸಾಮಾನ್ಯಕ್ಕಿಂತ 13% ಕಡಿಮೆಯಾಗಿದ್ದು, ಪ್ರಸ್ತುತ ಚಂಡಮಾರುತದ ಪ್ರಭಾವದಿಂದ ದೆಹಲಿ-ಎನ್ಸಿಆರ್ನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 70-85 ಕಿ.ಮೀ ತಲುಪುವ ಸಾಧ್ಯತೆಯಿದ್ದು, ದೆಹಲಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.