
ರಾಜ್ಯದಲ್ಲಿನ ಭೀಕರ ಬರಗಾಲ ಮತ್ತು ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧರಿಸಿದೆ.
ರಾಜ್ಯದಲ್ಲಿ ಹೊಸದಾಗಿ ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸ್ಟೇಟ್ ಫೆಸಿಲಿಟೇಷನ್ ಕೌನ್ಸಿಲ್ ರಚಿಸಲಾಗುವುದು.
ಕೇಂದ್ರ ಸರ್ಕಾರದಿಂದ ಮಂಜೂರಾದ 4500 ಎಲೆಕ್ಟ್ರಿಕ್ ಬಸ್ಗಳ ಟೆಂಡರ್ ಪ್ರಕ್ರಿಯೆ ಮತ್ತು ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.