
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು 'ಯುದ್ಧ ಅಪರಾಧಿ' ಎಂದು ಕರೆದಿದ್ದ ಬಿಜೆಪಿ ಸಂಸದ ಅನಂತ ಮಹಾರಾಜ್ ಅವರಿಗೆ ನೀಡಲಾಗಿದ್ದ 'ಬಂಗ ವಿಭೂಷಣ' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳ ಸರ್ಕಾರ ರದ್ದುಗೊಳಿಸಿದೆ.
2026ರ ಫೆಬ್ರವರಿ 21ರಂದು ನೀಡಲಾಗಿದ್ದ ಈ ಪ್ರಶಸ್ತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಇನ್ನು ಮುಂದೆ ಅವರು ಯಾವುದೇ ಸವಲತ್ತುಗಳನ್ನು ಪಡೆಯುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸೂಚನೆಯ ಮೇರೆಗೆ ಮಾಹಿತಿ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಇಲಾಖೆ ಈ ಕ್ರಮ ಕೈಗೊಂಡಿದ್ದು, ನೇತಾಜಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ.