
ಶಿಕ್ಷಕ ವೃತ್ತಿಗೆ ಗೌರವ ಮತ್ತು ಸಾಮಾಜಿಕ ಮನ್ನಣೆ ನೀಡುವ ಉದ್ದೇಶದಿಂದ, ಇನ್ಮುಂದೆ ಶಿಕ್ಷಕರು ತಮ್ಮ ಹೆಸರಿನ ಮುಂದೆ 'Tr.' (Teacher) ಬಿರುದನ್ನು ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯದಲ್ಲಿ ಒಟ್ಟು 4.50 ಲಕ್ಷ ಶಿಕ್ಷಕರಿದ್ದು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶೀಘ್ರವೇ 7.5% ಮೀಸಲಾತಿ ಕಲ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಕೂಡ್ಲಿಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಶಿಕ್ಷಣ ಇಲಾಖೆಯು ಶೀಘ್ರವೇ ಉರ್ದು ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.