
ರಾಜ್ಯದ ಉದ್ಯಾನವನಗಳ ಶೇ. 5ರಷ್ಟು ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ತಿದ್ದುಪಡಿ ಮಸೂದೆ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿದೆ.
ಈ ವಿಧೇಯಕವು ಲಾಲ್ಬಾಗ್ ಮೂಲಕ ಹಾದುಹೋಗುವ ಸುರಂಗ ರಸ್ತೆಯಂತಹ ಯೋಜನೆಗಳಿಗೆ ಅನುಕೂಲ ಮಾಡಿಕೊಡುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ವಿಧೇಯಕವನ್ನು ಮರುಪರಿಶೀಲನೆಗಾಗಿ ವಾಪಸ್ ಕಳುಹಿಸುವಂತೆ ಕೋರಿ ತೇಜಸ್ವಿ ಸೂರ್ಯ ಅವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.