
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ತಾಜ್ ಹೋಟೆಲ್ನಲ್ಲಿ ಇಮ್ರಾನ್ ಎಂಬಾತ ತನ್ನ 5 ಮತ್ತು 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ನೇಣುಹಾಕಿ ಹತ್ಯೆ ಮಾಡಿದ್ದಾನೆ.
ಆಗಸ್ಟ್ 10 ರಂದು ಹೋಟೆಲ್ ಸಿಬ್ಬಂದಿ ಬಾಗಿಲು ತೆರೆದಾಗ ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದ್ದು, ಆರೋಪಿ ಇಮ್ರಾನ್ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಾಗವಾರದ ನಿವಾಸಿಯಾದ ಇಮ್ರಾನ್, ತಾನೇ ಮಕ್ಕಳನ್ನು ಕೊಂದಿರುವುದಾಗಿ ಪತ್ರ ಬರೆದಿಟ್ಟಿದ್ದು, ಈ ಸಂಬಂಧ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.