
ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಮತ್ತು ಟಿಎಂಸಿ ನಾಯಕ ಆಶಿಶ್ ಬ್ಯಾನರ್ಜಿ ಅವರು ಆಗಸ್ಟ್ 16ರಂದು ಬಿರ್ಭೂಮ್ ಜಿಲ್ಲೆಯ ರಾಂಪುರಹತ್ನಲ್ಲಿರುವ ಪಕ್ಷದ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
2001ರಿಂದ 2026ರವರೆಗೆ ಸತತ ಐದು ಬಾರಿ ಶಾಸಕರಾಗಿದ್ದ 60ರ ಆಸುಪಾಸಿನ ಆಶಿಶ್ ಬ್ಯಾನರ್ಜಿ ಅವರು, ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್ನೋಟ್ನಲ್ಲಿ ತಾನು ಭ್ರಷ್ಟನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
2026ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಅವರು, ಜೂನ್ ತಿಂಗಳಲ್ಲಿ ಬಿರ್ಭೂಮ್ ಜಿಲ್ಲಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.