
ಕೆಆರ್ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುತ್ತಿರುವುದರಿಂದ, ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮದಲ್ಲಿ ಶನಿವಾರದಿಂದ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ.
ನದಿಯಲ್ಲಿ ನೀರಿನ ಹರಿವು ಮತ್ತು ಸೆಳೆತ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಗಾಗಿ ಅರಣ್ಯ ಇಲಾಖೆ ಈ ನಿರ್ಧಾರ ಕೈಗೊಂಡಿದೆ.
ಪ್ರಸ್ತುತ ನದಿಯಲ್ಲಿ 3ರಿಂದ 4 ಸಾವಿರ ಕ್ಯುಸೆಕ್ ನೀರು ಹರಿಯುತ್ತಿದ್ದು, ಪ್ರವಾಸಿಗರಿಗೆ ದಡದಿಂದ ಪಕ್ಷಿಗಳನ್ನು ವೀಕ್ಷಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.