
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 1036 ಪಿಡಿಒ ಹುದ್ದೆಗಳ ಪೈಕಿ, ಕೆಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 150 ಮಂದಿಗೆ ಮುಂದಿನ 2-3 ತಿಂಗಳಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ 80 ಅಧಿಕಾರಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ 76 ಜನರಿಗೆ ನೇಮಕಾತಿ ಆದೇಶಗಳನ್ನು ನೀಡಲಾಗಿದೆ.
ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಸುಮಾರು 200-250 ಹುದ್ದೆಗಳು ಖಾಲಿ ಉಳಿಯಲಿದ್ದು, ಒಟ್ಟಾರೆ ಶೇ. 90 ರಷ್ಟು ಪಿಡಿಒ ಹುದ್ದೆಗಳನ್ನು ಭರ್ತಿ ಮಾಡುವ ಗುರಿ ಹೊಂದಲಾಗಿದೆ.