
ಸಚಿವ ಸ್ಥಾನ ಸಿಗದ ಕಾರಣಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜೀನಾಮೆ ನೀಡಿದರೆ ತಕ್ಷಣವೇ ಅಂಗೀಕರಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜಕೀಯದಲ್ಲಿ ಅಧಿಕಾರಕ್ಕಿಂತ ಪಕ್ಷ ಮುಖ್ಯ ಎಂದು ಹೇಳಿದ ಅವರು, ತಮಗೂ ಮತ್ತು ಪರಮೇಶ್ವರ್ ಅವರಿಗೂ ಹಿಂದೆ ಸಚಿವ ಸ್ಥಾನ ತಪ್ಪಿದ್ದಾಗ ತಾಳ್ಮೆಯಿಂದ ಇದ್ದಿದ್ದನ್ನು ಉದಾಹರಣೆಯಾಗಿ ನೀಡಿದರು.
ಎಲ್ಲಾ ನೂತನ ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.