
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಸೆಪ್ಟೆಂಬರ್ 9ರಂದು ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 10ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಕಳೆದ 24 ಗಂಟೆಗಳಲ್ಲಿ ಮಂಕಿ ಮತ್ತು ಗದಗದಲ್ಲಿ ತಲಾ 3 ಹಾಗೂ 2 ಸೆಂ.ಮೀ ಮಳೆಯಾಗಿದ್ದು, ರಾಜ್ಯದ ಹಲವೆಡೆ ತುಂತುರು ಮಳೆ ದಾಖಲಾಗಿದೆ.