
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ವಿಭಾಗೀಯ ಪೀಠವು ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯ ಆದೇಶಕ್ಕೆ ತಡೆ ನೀಡಿದ್ದು, 5 ಲಕ್ಷ ರೂಪಾಯಿ ಬಾಂಡ್ ಮತ್ತು ಇಬ್ಬರು ಶೂರಿಟಿ ಸಲ್ಲಿಸಲು ಸೂಚಿಸಿದೆ.
ಜಾಮೀನು ಪಡೆದ ನಂತರ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಿಸಲು ಹೈಕೋರ್ಟ್ ಅವಕಾಶ ನೀಡಿದ್ದು, ಅವರು ಇಂದೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.