Technology
ಕರ್ನಾಟಕದ ಗ್ರಾಮೀಣ ಭಾಗಕ್ಕೂ ಕೃತಕ ಬುದ್ಧಿಮತ್ತೆ (AI) ವಿಸ್ತರಣೆ: ಮುಖ್ಯ ಕಾರ್ಯದರ್ಶಿ

ಕರ್ನಾಟಕದ ಗ್ರಾಮೀಣ ಭಾಗಕ್ಕೂ ಕೃತಕ ಬುದ್ಧಿಮತ್ತೆ (AI) ವಿಸ್ತರಣೆ: ಮುಖ್ಯ ಕಾರ್ಯದರ್ಶಿ

oneindia15h
THE BRIEF
1

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೆ, ಗ್ರಾಮೀಣ ಭಾಗದ ಯುವಕ-ಯುವತಿಯರಿಗೂ ತಲುಪಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಐ.ಎ.ಎಸ್. ಅವರು ಜುಲೈ 27ರಂದು ತಿಳಿಸಿದರು.

2

ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ರೂರಲ್ ಶೋರ್ಸ್ AI ಕೌಶಲ್ಯ ಮತ್ತು ಅನುಭವ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನಕ್ಕೆ ಕರುಣೆ, ನೈತಿಕತೆ ಮತ್ತು ಸದ್ಗುಣಗಳ ಸ್ಪರ್ಶವಿರಬೇಕು ಎಂದರು.

3

ರೂರಲ್ ಶೋರ್ಸ್ ಸಂಸ್ಥೆಯು ಕಳೆದ 18 ವರ್ಷಗಳಿಂದ ಸುಮಾರು 30,000ಕ್ಕೂ ಹೆಚ್ಚು ಗ್ರಾಮೀಣ ಯುವಕ-ಯುವತಿಯರಿಗೆ ತರಬೇತಿ ಹಾಗೂ ಉದ್ಯೋಗಾವಕಾಶ ನೀಡಿ, ಅವರು ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿದೆ ಎಂದು ಶಾಲಿನಿ ರಜನೀಶ್ ಶ್ಲಾಘಿಸಿದರು.