
ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಐಷಾರಾಮಿ ಹೋಟೆಲ್ಗಳು ಮತ್ತು ಮಾಲ್ಗಳ ಮೇಲೆ ಮೆಗಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಆಯುಕ್ತ ಶ್ರೀನಿವಾಸ್ ನೇತೃತ್ವದಲ್ಲಿ ಯುಬಿ ಸಿಟಿ, ಬ್ರಿಗೇಡ್ ರೋಡ್ ಮತ್ತು ಎಂ.ಜಿ. ರೋಡ್ನಲ್ಲಿರುವ ಹತ್ತಕ್ಕೂ ಹೆಚ್ಚು ಹೋಟೆಲ್ಗಳ ಅಡುಗೆಮನೆಗಳನ್ನು ಪರಿಶೀಲಿಸಿ ಆಹಾರದ ಸ್ಯಾಂಪಲ್ಗಳನ್ನು ಸಂಗ್ರಹಿಸಲಾಗಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ತಪ್ಪಿತಸ್ಥ ಹೋಟೆಲ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಈ ದಾಳಿಗಳು ಯಾವುದೇ ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.