
ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯಂತೆ, ರಾಜ್ಯ ಸರ್ಕಾರವು ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರನ್ನು ಹರಿಸುತ್ತಿದೆ.
ಕೆಆರ್ಎಸ್ ಡ್ಯಾಂನಲ್ಲಿ ಕೇವಲ 106.42 ಅಡಿ ನೀರಿನ ಮಟ್ಟವಿದ್ದರೂ, 2,304 ಕ್ಯೂಸೆಕ್ ಒಳಹರಿವಿನ ವಿರುದ್ಧ 8,121 ಕ್ಯೂಸೆಕ್ ನೀರನ್ನು ಹೊರಬಿಡುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.
ಸರ್ಕಾರದ ಈ ಕ್ರಮವನ್ನು ಖಂಡಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರರು ತಲೆ ಮೇಲೆ ಚಪ್ಪಡಿ ಕಲ್ಲು ಹೊತ್ತು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.