
ಕರ್ನಾಟಕದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ದಿವಂಗತ ಚನ್ನಮ್ಮ ಅವರ ಹೆಸರನ್ನು ಇಡಬೇಕು ಎಂದು ಜೆಡಿಎಸ್ ಸದಸ್ಯ ಟಿ.ಎ. ಶರವಣ ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ತಿನ ಗುರುವಾರದ ಕಲಾಪದಲ್ಲಿ ಸಂತಾಪ ಸೂಚನೆ ವೇಳೆ ಮಾತನಾಡಿದ ಅವರು, ಚನ್ನಮ್ಮ ಅವರು ಮನೆಗೆ ಬಂದವರಿಗೆ ಊಟ ಬಡಿಸದೆ ಕಳುಹಿಸುತ್ತಿರಲಿಲ್ಲ, ಆದ್ದರಿಂದ ಬಿಸಿಯೂಟಕ್ಕೆ ಅವರ ಹೆಸರಿಟ್ಟು ಗೌರವಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದರು.
ಇದೇ ವೇಳೆ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರು, ಬಹುಭಾಷಾ ಗಾಯಕಿ ದಿವಂಗತ ಎಸ್. ಜಾನಕಿ ಅವರ ನೆನಪಿನಲ್ಲಿ ಮೈಸೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಸ್ಮಾರಕವೊಂದನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.