
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗಿದೆ.
ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಭಾರತವು ಸಲಾಲ್ ಅಣೆಕಟ್ಟಿನ ಹಲವು ಗೇಟ್ಗಳನ್ನು ತೆರೆದಿದ್ದು, ನದಿಯ ಕೆಳಭಾಗಕ್ಕೆ ನಿಯಂತ್ರಿತ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ.
ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪಿನ ನಂತರ ಸಂಭ್ರಮದಲ್ಲಿದ್ದ ಪಾಕಿಸ್ತಾನಕ್ಕೆ, ಈ ನೀರಿನ ಬಿಡುಗಡೆಯು ಪ್ರವಾಹದ ಭೀತಿಯನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.