
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಾಗಿ 152 ಕೋಟಿ ರೂಪಾಯಿ ವೆಚ್ಚದಲ್ಲಿ 400 ಹೊಸ ಬಸ್ಗಳನ್ನು ಖರೀದಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಹೊಸ ಬಸ್ಗಳು ಬೀದರ್, ಕಲಬುರಗಿ, ಕೊಪ್ಪಳ, ವಿಜಯನಗರ, ಬಳ್ಳಾರಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಸಾರ್ವಜನಿಕರಿಗೆ ಸಾರಿಗೆ ಸಂಪರ್ಕವನ್ನು ಸುಧಾರಿಸಲಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಸಂಪರ್ಕವನ್ನು ಬಲಪಡಿಸಲು ಈ ಬಸ್ಗಳನ್ನು ಬೆಂಗಳೂರು ಮತ್ತು ಹುಬ್ಬಳ್ಳಿಯಂತಹ ದೂರದ ಮಾರ್ಗಗಳಲ್ಲೂ ಓಡಿಸಲು ಸರ್ಕಾರ ಚಿಂತನೆ ನಡೆಸಿದೆ.