
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.
ಡಾಲರ್ಸ್ ಕಾಲೋನಿಯ ನಿವಾಸದಿಂದ ಹೊರಬರದಂತೆ ತಡೆಯೊಡ್ಡಿದ ಪೊಲೀಸರ ಕ್ರಮವನ್ನು ವಿರೋಧಿಸಿ, ವಾಟಾಳ್ ನಾಗರಾಜ್ ಬಾಯಿಗೆ ಸೆಲ್ಲೋ ಟೇಪ್ ಹಾಕಿಕೊಂಡು ಪ್ರತಿಭಟನೆ ನಡೆಸಿದರು.
ಎಸಿಪಿ ತನ್ವೀರ್ ಮತ್ತು ಡಿಸಿಪಿ ನೇಮಗೌಡ ನೇತೃತ್ವದ ತಂಡವು ವಾಟಾಳ್ ನಾಗರಾಜ್ ಅವರೊಂದಿಗೆ ನಾರಾಯಣ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದಿದೆ.