
ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲು ಕಾವೇರಿ ನೀರಾವರಿ ನಿಗಮ ನಿರ್ಧರಿಸಿದೆ.
ಆರಂಭಿಕವಾಗಿ 7,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ ಇದನ್ನು 10,000 ರಿಂದ 15,000 ಕ್ಯೂಸೆಕ್ವರೆಗೆ ಹೆಚ್ಚಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು, ನಂಜನಗೂಡು ಮತ್ತು ಟಿ.ನರಸೀಪುರ ಸೇರಿದಂತೆ ನದಿ ತೀರದ ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹಾಗೂ ಜಾನುವಾರುಗಳನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.