
ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ಮತ್ತು ಖಾತಾ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಹೊಸ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತರುತ್ತಿದೆ.
ನರೇಗಾ ಯೋಜನೆಯಡಿ ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಜಾಬ್ ಕಾರ್ಡ್ ವಿತರಿಸಬೇಕು ಮತ್ತು ಕೆಲಸ ನೀಡುವಲ್ಲಿ ವಿಳಂಬ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 51.30 ಲಕ್ಷ ಮಾನವ ದಿನಗಳ ಸೃಷ್ಟಿಯ ಗುರಿ ಹೊಂದಲಾಗಿದ್ದು, ಜುಲೈವರೆಗೆ ಶೇ. 46 ರಷ್ಟು ಮಾತ್ರ ಸಾಧನೆಯಾಗಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.