
ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅವರು ಡಿಆರ್ಎಸ್ ತೆಗೆದುಕೊಳ್ಳುವಂತೆ ನಾಯಕ ಇಶಾನ್ ಕಿಶನ್ಗೆ ಒತ್ತಾಯಿಸಿ ಯಶಸ್ವಿಯಾಗಿದ್ದಾರೆ.
ಅಂಪೈರ್ ನೀಡಿದ್ದ ತೀರ್ಪನ್ನು ಬದಲಾಯಿಸುವಲ್ಲಿ ಸೂರ್ಯವಂಶಿ ಅವರ ನಿರ್ಧಾರ ಪ್ರಮುಖ ಪಾತ್ರ ವಹಿಸಿದ್ದು, ಅವರ ಜವಾಬ್ದಾರಿಯುತ ನಡವಳಿಕೆಗೆ ಕಾಮೆಂಟೇಟರ್ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈಸ್ಟ್ ಝೋನ್ ತಂಡದ ಉಪನಾಯಕನಾಗಿರುವ ಸೂರ್ಯವಂಶಿ, ಈ ಟೂರ್ನಿಯಲ್ಲಿ ಹಂಗಾಮಿ ನಾಯಕನಾಗಿಯೂ ಜವಾಬ್ದಾರಿ ನಿರ್ವಹಿಸಿ ಗಮನ ಸೆಳೆದಿದ್ದಾರೆ.